24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಮಚ್ಚಿನ : ಸುಮಾರು 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭವು ಫೆ. 24 ರಂದು ಮಚ್ಚಿನ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್, ಜಯಪ್ರಕಾಶ್ ಸಂಪಿಗೆತ್ತಾಯ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಪೋಷಕರ ಸಮಿತಿಯ ಅಧ್ಯಕ್ಷರಾದ ಸುಮಲತಾ, ಮಾಜಿ ಅಧ್ಯಕ್ಷ ಪರಮೇಶ್ವರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳಾ ಅಗ್ನೇಸ್ ಲೋಬೊ, ಪೋಷಕ ಸಮಿತಿಯ ಸದಸ್ಯರಾದ ಹನೀಪ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರು ಹಾಗೂ ಮಕ್ಕಳು ತಮ್ಮ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾ ಪರವಾಗಿ ಶಿಕ್ಷಕರು, ಶಾಲಾ ಪೋಷಕರ ಸಮಿತಿ, ಚಾಲಕರ, ಬಿಲ್ಲವ ವೇದಿಕೆ ಬಳ್ಳಮಂಜ ಮತ್ತು ಅಡುಗೆ ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿದ ವಿಠಲ್ ಬಿ ಮಾತನಾಡಿ ಶಾಲೆಯ ಅಭಿವೃದ್ಧಿಗೆ ನನ್ನೊಂದಿಗೆ ಸಹಕರಿಸಿದ ಪೋಷಕರಿಗೆ ಹಾಗೂ ಊರವರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಮಕ್ಕಳಿಗೆ ಬುದ್ಧಿ ಮಾತುಗಳನ್ನು ಹೇಳಿ ತಮ್ಮ ಮುಂದಿನ ವಿದ್ಯಾಭ್ಯಾಸವು ಈ ಶಾಲೆಯ ಹೆಸರು ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಶಿಕ್ಷಕ ರಮೇಶ್ ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕಿ ದಿವ್ಯ ಸ್ವಾಗತಿಸಿ, ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ನಿರೂಪಿಸಿದರು. ಶಿಕ್ಷಕಿ ಸುನಿತಾ. ಬಿ ಧನ್ಯವಾದವಿತ್ತರು. ಮಕ್ಕಳ ಪೋಷಕರು, ಊರವರು, ಶಿಕ್ಷಕರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya
error: Content is protected !!