ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಮಚ್ಚಿನ : ಸುಮಾರು 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭವು ಫೆ. 24 ರಂದು ಮಚ್ಚಿನ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್, ಜಯಪ್ರಕಾಶ್ ಸಂಪಿಗೆತ್ತಾಯ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಪೋಷಕರ ಸಮಿತಿಯ ಅಧ್ಯಕ್ಷರಾದ ಸುಮಲತಾ, ಮಾಜಿ ಅಧ್ಯಕ್ಷ ಪರಮೇಶ್ವರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳಾ ಅಗ್ನೇಸ್ ಲೋಬೊ, ಪೋಷಕ ಸಮಿತಿಯ ಸದಸ್ಯರಾದ ಹನೀಪ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರು ಹಾಗೂ ಮಕ್ಕಳು ತಮ್ಮ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾ ಪರವಾಗಿ ಶಿಕ್ಷಕರು, ಶಾಲಾ ಪೋಷಕರ ಸಮಿತಿ, ಚಾಲಕರ, ಬಿಲ್ಲವ ವೇದಿಕೆ ಬಳ್ಳಮಂಜ ಮತ್ತು ಅಡುಗೆ ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿದ ವಿಠಲ್ ಬಿ ಮಾತನಾಡಿ ಶಾಲೆಯ ಅಭಿವೃದ್ಧಿಗೆ ನನ್ನೊಂದಿಗೆ ಸಹಕರಿಸಿದ ಪೋಷಕರಿಗೆ ಹಾಗೂ ಊರವರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಮಕ್ಕಳಿಗೆ ಬುದ್ಧಿ ಮಾತುಗಳನ್ನು ಹೇಳಿ ತಮ್ಮ ಮುಂದಿನ ವಿದ್ಯಾಭ್ಯಾಸವು ಈ ಶಾಲೆಯ ಹೆಸರು ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಶಿಕ್ಷಕ ರಮೇಶ್ ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕಿ ದಿವ್ಯ ಸ್ವಾಗತಿಸಿ, ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ನಿರೂಪಿಸಿದರು. ಶಿಕ್ಷಕಿ ಸುನಿತಾ. ಬಿ ಧನ್ಯವಾದವಿತ್ತರು. ಮಕ್ಕಳ ಪೋಷಕರು, ಊರವರು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya
error: Content is protected !!