23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಮಚ್ಚಿನ : ಸುಮಾರು 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭವು ಫೆ. 24 ರಂದು ಮಚ್ಚಿನ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್, ಜಯಪ್ರಕಾಶ್ ಸಂಪಿಗೆತ್ತಾಯ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಪೋಷಕರ ಸಮಿತಿಯ ಅಧ್ಯಕ್ಷರಾದ ಸುಮಲತಾ, ಮಾಜಿ ಅಧ್ಯಕ್ಷ ಪರಮೇಶ್ವರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳಾ ಅಗ್ನೇಸ್ ಲೋಬೊ, ಪೋಷಕ ಸಮಿತಿಯ ಸದಸ್ಯರಾದ ಹನೀಪ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರು ಹಾಗೂ ಮಕ್ಕಳು ತಮ್ಮ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾ ಪರವಾಗಿ ಶಿಕ್ಷಕರು, ಶಾಲಾ ಪೋಷಕರ ಸಮಿತಿ, ಚಾಲಕರ, ಬಿಲ್ಲವ ವೇದಿಕೆ ಬಳ್ಳಮಂಜ ಮತ್ತು ಅಡುಗೆ ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿದ ವಿಠಲ್ ಬಿ ಮಾತನಾಡಿ ಶಾಲೆಯ ಅಭಿವೃದ್ಧಿಗೆ ನನ್ನೊಂದಿಗೆ ಸಹಕರಿಸಿದ ಪೋಷಕರಿಗೆ ಹಾಗೂ ಊರವರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಮಕ್ಕಳಿಗೆ ಬುದ್ಧಿ ಮಾತುಗಳನ್ನು ಹೇಳಿ ತಮ್ಮ ಮುಂದಿನ ವಿದ್ಯಾಭ್ಯಾಸವು ಈ ಶಾಲೆಯ ಹೆಸರು ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಶಿಕ್ಷಕ ರಮೇಶ್ ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕಿ ದಿವ್ಯ ಸ್ವಾಗತಿಸಿ, ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ನಿರೂಪಿಸಿದರು. ಶಿಕ್ಷಕಿ ಸುನಿತಾ. ಬಿ ಧನ್ಯವಾದವಿತ್ತರು. ಮಕ್ಕಳ ಪೋಷಕರು, ಊರವರು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya
error: Content is protected !!