ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ಬಿಎಮ್ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಮೊಹಮ್ಮದ್ ಕೆಎಸ್ಆರ್ ಟಿಸಿ ಉಪಸ್ಥಿತರಿದ್ದರು. ಇಬ್ರಾಹಿಂ ಉಸ್ತಾದ್ ಅವರು ದುವಾ ಕಾರ್ಯಕ್ರಮ ನೆರವೇರಿಸಿ, ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ರವರು ವಾಚಿಸಿದರು. ಹಳೆ ಕಮಿಟಿಯನ್ನು ಬರ್ಕಾಸುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಪ್ರಧಾನ ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಸುಲೈಮಾನ್ ಎ.ಪಿ., ಇಲ್ಯಾಸ್ ನಾಡ್ಜೆ, ಕೋಶಾಧಿಕಾರಿಯಾಗಿ ರಹೀಮ್ ಪುನರಾಯ್ಕೆಗೊಂಡರು.

ಸದಸ್ಯರುಗಳಾಗಿ ಸಲಿಮ್, ರಹೀಮ್ ಯು.ಕೆ, ಅಝೀಜ್ ಯು.ಕೆ, ಅಬುಸಲಿ ಎನ್.ಆರ್., ರಹಿಮಾನ್, ಇಸುಬು ಹಲೇಜಿ ಮಯ್ಯದ್ದಿ , ಅಶ್ರಫ್ , ಅಶ್ರಫ್ ಮೋನು, ಸಂಸುಂದ್ದಿನ್ ನಾಡ್ಜೆ, ಹನೀಫ್ , ಮುಸ್ತಫಾ , ಹಸನ್ , ಆಸೀಫ್ , ಆನ್ಸರ್ ಯು ಪಿ. ಆಯ್ಕೆಗೊಂಡರು.


ನೂತನ ಮದರಸದ ಕೆಲಸ ಕಾರ್ಯಗಳು ಆದಷ್ಟು ಬೇಗ ಪೂರ್ತಿಗೊಳಿಸಲು ದಾನಿಗಳ ಸಹಕಾರ ಕೇಳುವುದೆಂದು ತೀರ್ಮಾನಿಸಿ ಆದಷ್ಟು ಬೇಗ ಮದರಸ ಪೂರ್ತಿ ಗೊಳಿಸುವ ಪ್ರಯತ್ನ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!