July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ಬಿಎಮ್ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಮೊಹಮ್ಮದ್ ಕೆಎಸ್ಆರ್ ಟಿಸಿ ಉಪಸ್ಥಿತರಿದ್ದರು. ಇಬ್ರಾಹಿಂ ಉಸ್ತಾದ್ ಅವರು ದುವಾ ಕಾರ್ಯಕ್ರಮ ನೆರವೇರಿಸಿ, ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ರವರು ವಾಚಿಸಿದರು. ಹಳೆ ಕಮಿಟಿಯನ್ನು ಬರ್ಕಾಸುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಪ್ರಧಾನ ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಸುಲೈಮಾನ್ ಎ.ಪಿ., ಇಲ್ಯಾಸ್ ನಾಡ್ಜೆ, ಕೋಶಾಧಿಕಾರಿಯಾಗಿ ರಹೀಮ್ ಪುನರಾಯ್ಕೆಗೊಂಡರು.

ಸದಸ್ಯರುಗಳಾಗಿ ಸಲಿಮ್, ರಹೀಮ್ ಯು.ಕೆ, ಅಝೀಜ್ ಯು.ಕೆ, ಅಬುಸಲಿ ಎನ್.ಆರ್., ರಹಿಮಾನ್, ಇಸುಬು ಹಲೇಜಿ ಮಯ್ಯದ್ದಿ , ಅಶ್ರಫ್ , ಅಶ್ರಫ್ ಮೋನು, ಸಂಸುಂದ್ದಿನ್ ನಾಡ್ಜೆ, ಹನೀಫ್ , ಮುಸ್ತಫಾ , ಹಸನ್ , ಆಸೀಫ್ , ಆನ್ಸರ್ ಯು ಪಿ. ಆಯ್ಕೆಗೊಂಡರು.


ನೂತನ ಮದರಸದ ಕೆಲಸ ಕಾರ್ಯಗಳು ಆದಷ್ಟು ಬೇಗ ಪೂರ್ತಿಗೊಳಿಸಲು ದಾನಿಗಳ ಸಹಕಾರ ಕೇಳುವುದೆಂದು ತೀರ್ಮಾನಿಸಿ ಆದಷ್ಟು ಬೇಗ ಮದರಸ ಪೂರ್ತಿ ಗೊಳಿಸುವ ಪ್ರಯತ್ನ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!