24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ಬಿಎಮ್ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಮೊಹಮ್ಮದ್ ಕೆಎಸ್ಆರ್ ಟಿಸಿ ಉಪಸ್ಥಿತರಿದ್ದರು. ಇಬ್ರಾಹಿಂ ಉಸ್ತಾದ್ ಅವರು ದುವಾ ಕಾರ್ಯಕ್ರಮ ನೆರವೇರಿಸಿ, ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ರವರು ವಾಚಿಸಿದರು. ಹಳೆ ಕಮಿಟಿಯನ್ನು ಬರ್ಕಾಸುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಪ್ರಧಾನ ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಸುಲೈಮಾನ್ ಎ.ಪಿ., ಇಲ್ಯಾಸ್ ನಾಡ್ಜೆ, ಕೋಶಾಧಿಕಾರಿಯಾಗಿ ರಹೀಮ್ ಪುನರಾಯ್ಕೆಗೊಂಡರು.

ಸದಸ್ಯರುಗಳಾಗಿ ಸಲಿಮ್, ರಹೀಮ್ ಯು.ಕೆ, ಅಝೀಜ್ ಯು.ಕೆ, ಅಬುಸಲಿ ಎನ್.ಆರ್., ರಹಿಮಾನ್, ಇಸುಬು ಹಲೇಜಿ ಮಯ್ಯದ್ದಿ , ಅಶ್ರಫ್ , ಅಶ್ರಫ್ ಮೋನು, ಸಂಸುಂದ್ದಿನ್ ನಾಡ್ಜೆ, ಹನೀಫ್ , ಮುಸ್ತಫಾ , ಹಸನ್ , ಆಸೀಫ್ , ಆನ್ಸರ್ ಯು ಪಿ. ಆಯ್ಕೆಗೊಂಡರು.


ನೂತನ ಮದರಸದ ಕೆಲಸ ಕಾರ್ಯಗಳು ಆದಷ್ಟು ಬೇಗ ಪೂರ್ತಿಗೊಳಿಸಲು ದಾನಿಗಳ ಸಹಕಾರ ಕೇಳುವುದೆಂದು ತೀರ್ಮಾನಿಸಿ ಆದಷ್ಟು ಬೇಗ ಮದರಸ ಪೂರ್ತಿ ಗೊಳಿಸುವ ಪ್ರಯತ್ನ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya
error: Content is protected !!