April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

ಉಜಿರೆ : ಮಂಗಳೂರು ಶ್ರೀ ಧ.ಮ. ಕಾನೂನು ಕಾಲೇಜು ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರವು ಫೆ. 23,24 ಹಾಗೂ 25ರಂದು ಆಯೋಜಿಸಿದ್ದ 32ನೇ ವರ್ಷದ ಯಕ್ಷೋತ್ಸವ -2024 ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಕಾಲೇಜು ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.

ಸಮಗ್ರ ವೈಯಕ್ತಿಕದಲ್ಲಿ ಜಿ ಸುಬ್ರಹ್ಮಣ್ಯ ದ್ವಿತೀಯ ಸ್ಥಾನ, ವೈಯಕ್ತಿಕ ತಂಡ ಶ್ರೇಷ್ಠ ಹಾಗೂ ಸ್ತ್ರೀ ವೇಷದಲ್ಲಿ ಸಾಕ್ಷಿ ಎಂ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಭಾಗವತರಾಗಿ ಸಿಂಚನಾ ಮೂಡುಕೊಡಿ, ಚೆಂಡೆಯಲ್ಲಿ ಆನಂದ ಗುಡಿಗಾರ್, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಹಾಗೂ ಮುಮ್ಮೇಳದಲ್ಲಿ ಸೌರವ್ ಶೆಟ್ಟಿ, ವರ್ಷಿತ್ ಎಂ ಡಿ, ಮಿತುನ್ ರಾಜ್, ಜಿ ವಿ ವಿಜೇತ್, ಕೀರ್ತನ್ ಯು, ಹಾರ್ದಿಕ್, ಜಿ ಸುಬ್ರಹ್ಮಣ್ಯ, ದೀಪಶ್ರೀ ಹೊಳ್ಳ, ಸಾಕ್ಷಿ ಎಂ ಕೆ ಭಾಗವಹಿಸಿದ್ದರು.

ಅರುಣ್ ಕುಮಾರ್ ಧರ್ಮಸ್ಥಳ ಈ ತಂಡಕ್ಕೆ ನಿರ್ದೇಶನವನ್ನು ನೀಡಿರುತ್ತಾರೆ. ಕು. ಮುಕ್ತಿಶ್ರೀ ಹಾಗೂ ಕು.ಶ್ರುತಿ ದೇವಾಡಿಗ ರಂಗ ಸಹಾಯಕರಾಗಿ ಸಹಕರಿಸಿದರು.

Related posts

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!