22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

ಲ್ಯಾಲ: ಇಲ್ಲಿಯ ಶ್ರೀ ಕ್ಷೇತ್ರ ಪುತ್ರಬೈಲು ಶ್ರೀ ಮಹಮ್ಮಾಯಿ ಅಮ್ಮನವರು ಹಾಗೂ ಪರಿವಾರ ಶಕ್ತಿಗಳ ಸ್ಥಳ ಸಾನ್ನಿಧ್ಯದಲ್ಲಿ ಫೆ.25ರಂದು ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ ಜರಗಿತು.

ಫೆ.24ರಂದು ಬೆಳಿಗ್ಗೆ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನ ಹಾಗೂ ಪರಿವಾರ ಶಕ್ತಿಗಳ ಸಾನ್ನಿಧ್ಯದಲ್ಲಿ ಶುದ್ಧಿ ಕಲಶ, ಸಾನ್ನಿಧ್ಯ ಶುದ್ಧಿ, ಗಣಪತಿ ಹೋಮ ಫೆ.25ರಂದು ಸಂಜೆ ಪ್ರೊ. ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಮತ್ತು ಬಳಗದವರಿಂದ “ಕದಂಬ ಕೌಶಿಕೆ”. ಯಕ್ಷಗಾನ ತಾಳ ಮದ್ದಲೆ ನಡೆಯಿತು.

ರಾತ್ರಿ ಶ್ರೀ ಮಹಮ್ಮಾಯಿ ಅಮ್ಮನವರ ಆಲಯದಿಂದ ಭಂಡಾರ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಿಂದ ದೇವಿಯ ಉತ್ಸವಮೂರ್ತಿ ಹಾಗೂ ಪರಿವಾರ ಶಕ್ತಿಗಳ ಭಂಡಾರವು ಪೂರ್ಣಕುಂಭ, ಕಲಶ, ಚೆಂಡೆ, ಕೊಂಬು, ವಾಲಗ, ಸುಡುಮದ್ದಿನ ಪ್ರದರ್ಶನದೊಂದಿಗೆ, ವೈಭವಪೂರ್ಣ ಮೆರವಣಿಗೆಯೊಂದಿಗೆ ಗಡಿವಾಡು ಸ್ಥಳಕ್ಕೆ ತೆರಳಿ ಪುನಃ ಅಶ್ವತ್ಥಕಟ್ಟೆಯಲ್ಲಿ ಶ್ರೀ ಅಮ್ಮನವರು ಹಾಗೂ ಸ್ಥಳ ಸಾನ್ನಿಧ್ಯದಲ್ಲಿ ಚಾಮುಂಡೇಶ್ವರಿ, ಉಚ್ಚೆಂಗಿ ಹಾಗೂ ಕ್ಷೇತ್ರಪಾಲಕ ಗುಳಿಗ, ಪರಿವಾರ ಶಕ್ತಿಗಳು ಅಲಂಕರಿಸಿ ಮಾರಿಪೂಜೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಿತು.,

ಈ ಸಂದರ್ಭದಲ್ಲಿ ಮಹಮ್ಮಾಯಿ ಸೇವಾ ಸಮಿತಿಯ ಗೌರವಾಧ್ಯಕ್ಷ ಈಶ್ವರ ಬೈರ, ಮಹಮ್ಮಾಯಿ ಸೇವಾ ಸಮಿತಿಯ ಅಧ್ಯಕ್ಷ ಮೋಹನದಾಸ, ಮಹಮ್ಮಾಯಿ ಸೇವಾ ಸಮಿತಿಯ ಉಪಾಧ್ಯಕ್ಷ ವಿ.ಎಸ್.ಸುರೇಶ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ಸಮಿತಿಯ ಕಾರ್ಯದರ್ಶಿ ಕೃಷ್ಣ ಪ್ಪ ಸಿ, ಕೋಶಾಧಿಕಾರಿ ಹೆಚ್.ಬಿ ಸೀತಾರಾಮ, ಜೊತೆಕಾರ್ಯದರ್ಶಿ ಎನ್.ಕೆ ಸುಂದರ, ಟ್ರಸ್ಟ್ ಕಾರ್ಯದರ್ಶಿ ರಮೇಶ್ ವಿ.ಎಸ್ , ಮಹಮ್ಮಾಯಿ ಸೇವಾಸಮಿತಿಯ ಸರ್ವಸದಸ್ಯರು, ಟ್ರಸ್ಟಿಗಳು ಹಾಗೂ ಊರ ಭಕ್ತಾದಿಗಳು ಭಾಗವಹಿಸಿದರು.

ರಾತ್ರಿ ಸ್ಥಳೀಯ ಮಕ್ಕಳು ಹಾಗೂ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ವೈಭವ ನಡೆಯಿತು.

Related posts

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!