38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

ಬೆಳ್ತಂಗಡಿ : ಬಳ್ಳಾಲರಾಯನ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚರಣಕ್ಕೆ ಬಂದು ನಾಪತ್ತೆಯಾಗಿದ್ದ, ಯುವಕನನ್ನು ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ರಾತ್ರಿ ಕಾಡಿನಲ್ಲಿ ಹುಡುಕಾಡಿ ಪತ್ತೆ ಹಚ್ಚಿದ ಪ್ರಕರಣ ವರದಿಯಾಗಿದೆ.


ಮಂಗಳೂರಿನ ಖಾಸಗಿ ಸಂಸ್ಥೆಯ 10 ಮಂದಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಗಳು ಭಂಡಾಜೆ ಫಾಲ್ಸ್ ಮತ್ತು ಬಳ್ಳಾಲರಾಯನ ದುರ್ಗ ನೋಡಲು ಬಂದಿದ್ದವರು ಕಾಡಿನ ಮಧ್ಯೆ ತಂಡದಲ್ಲಿದ್ದ ಧನುಷ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದ ಆತನ ಮೊಬೈಲ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಇದರಿಂದ ತೀವ್ರ ಗೊಂದಲ ಹಾಗೂ ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು ಹುಡುಕಾಡಿ ನಂತರ ಸುಂಕಸಾಲೆ ಎಂಬ ಗ್ರಾಮಕ್ಕೆ ಬಂದು ತಂಡದಲ್ಲಿದ್ದ ಆದಿತ್ಯ ಎಂಬ ಯುವ 112 ಪೊಲೀಸ್ ವಾಹನಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಿಸಿ, ಹುಡುಕಾಟ ನಡೆಸಿದಾಗ ತಡ ರಾತ್ರಿ ದಟ್ಟವಾದ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದ ಯುವಕ ಧನುಷ್ ಒಬ್ಬನೇ ನಿಂತಿರುವುದು ಕಂಡು ಬಂದಿದ್ದು, ಆತನನ್ನು ರಕ್ಷಿಸಿ, ಧೈರ್ಯ ತುಂಬಿ, ಕರೆ ತಂದು ಆತನ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳ ತಂಡವನ್ನು ವಾಹನದಲ್ಲಿ ಕೊಟ್ಟಿಗೆಹಾರಕ್ಕೆ ಕರೆತಂದು ನಂತರ ಮಂಗಳೂರಿಗೆ ಕಳುಹಿಸಿಕೊಟ್ಟಿರುವುದಾಗಿ ವರದಿಯಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಇದ್ದರು.

Related posts

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya
error: Content is protected !!