23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

ಬೆಳ್ತಂಗಡಿ : ಬಳ್ಳಾಲರಾಯನ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚರಣಕ್ಕೆ ಬಂದು ನಾಪತ್ತೆಯಾಗಿದ್ದ, ಯುವಕನನ್ನು ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ರಾತ್ರಿ ಕಾಡಿನಲ್ಲಿ ಹುಡುಕಾಡಿ ಪತ್ತೆ ಹಚ್ಚಿದ ಪ್ರಕರಣ ವರದಿಯಾಗಿದೆ.


ಮಂಗಳೂರಿನ ಖಾಸಗಿ ಸಂಸ್ಥೆಯ 10 ಮಂದಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಗಳು ಭಂಡಾಜೆ ಫಾಲ್ಸ್ ಮತ್ತು ಬಳ್ಳಾಲರಾಯನ ದುರ್ಗ ನೋಡಲು ಬಂದಿದ್ದವರು ಕಾಡಿನ ಮಧ್ಯೆ ತಂಡದಲ್ಲಿದ್ದ ಧನುಷ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದ ಆತನ ಮೊಬೈಲ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಇದರಿಂದ ತೀವ್ರ ಗೊಂದಲ ಹಾಗೂ ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು ಹುಡುಕಾಡಿ ನಂತರ ಸುಂಕಸಾಲೆ ಎಂಬ ಗ್ರಾಮಕ್ಕೆ ಬಂದು ತಂಡದಲ್ಲಿದ್ದ ಆದಿತ್ಯ ಎಂಬ ಯುವ 112 ಪೊಲೀಸ್ ವಾಹನಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಿಸಿ, ಹುಡುಕಾಟ ನಡೆಸಿದಾಗ ತಡ ರಾತ್ರಿ ದಟ್ಟವಾದ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದ ಯುವಕ ಧನುಷ್ ಒಬ್ಬನೇ ನಿಂತಿರುವುದು ಕಂಡು ಬಂದಿದ್ದು, ಆತನನ್ನು ರಕ್ಷಿಸಿ, ಧೈರ್ಯ ತುಂಬಿ, ಕರೆ ತಂದು ಆತನ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳ ತಂಡವನ್ನು ವಾಹನದಲ್ಲಿ ಕೊಟ್ಟಿಗೆಹಾರಕ್ಕೆ ಕರೆತಂದು ನಂತರ ಮಂಗಳೂರಿಗೆ ಕಳುಹಿಸಿಕೊಟ್ಟಿರುವುದಾಗಿ ವರದಿಯಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಇದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!