September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

ಬೆಳ್ತಂಗಡಿ : ಬಳ್ಳಾಲರಾಯನ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚರಣಕ್ಕೆ ಬಂದು ನಾಪತ್ತೆಯಾಗಿದ್ದ, ಯುವಕನನ್ನು ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ರಾತ್ರಿ ಕಾಡಿನಲ್ಲಿ ಹುಡುಕಾಡಿ ಪತ್ತೆ ಹಚ್ಚಿದ ಪ್ರಕರಣ ವರದಿಯಾಗಿದೆ.


ಮಂಗಳೂರಿನ ಖಾಸಗಿ ಸಂಸ್ಥೆಯ 10 ಮಂದಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಗಳು ಭಂಡಾಜೆ ಫಾಲ್ಸ್ ಮತ್ತು ಬಳ್ಳಾಲರಾಯನ ದುರ್ಗ ನೋಡಲು ಬಂದಿದ್ದವರು ಕಾಡಿನ ಮಧ್ಯೆ ತಂಡದಲ್ಲಿದ್ದ ಧನುಷ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದ ಆತನ ಮೊಬೈಲ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಇದರಿಂದ ತೀವ್ರ ಗೊಂದಲ ಹಾಗೂ ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು ಹುಡುಕಾಡಿ ನಂತರ ಸುಂಕಸಾಲೆ ಎಂಬ ಗ್ರಾಮಕ್ಕೆ ಬಂದು ತಂಡದಲ್ಲಿದ್ದ ಆದಿತ್ಯ ಎಂಬ ಯುವ 112 ಪೊಲೀಸ್ ವಾಹನಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಿಸಿ, ಹುಡುಕಾಟ ನಡೆಸಿದಾಗ ತಡ ರಾತ್ರಿ ದಟ್ಟವಾದ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದ ಯುವಕ ಧನುಷ್ ಒಬ್ಬನೇ ನಿಂತಿರುವುದು ಕಂಡು ಬಂದಿದ್ದು, ಆತನನ್ನು ರಕ್ಷಿಸಿ, ಧೈರ್ಯ ತುಂಬಿ, ಕರೆ ತಂದು ಆತನ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳ ತಂಡವನ್ನು ವಾಹನದಲ್ಲಿ ಕೊಟ್ಟಿಗೆಹಾರಕ್ಕೆ ಕರೆತಂದು ನಂತರ ಮಂಗಳೂರಿಗೆ ಕಳುಹಿಸಿಕೊಟ್ಟಿರುವುದಾಗಿ ವರದಿಯಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಇದ್ದರು.

Related posts

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya
error: Content is protected !!