30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಮಚ್ಚಿನ : ಸುಮಾರು 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭವು ಫೆ. 24 ರಂದು ಮಚ್ಚಿನ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್, ಜಯಪ್ರಕಾಶ್ ಸಂಪಿಗೆತ್ತಾಯ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಪೋಷಕರ ಸಮಿತಿಯ ಅಧ್ಯಕ್ಷರಾದ ಸುಮಲತಾ, ಮಾಜಿ ಅಧ್ಯಕ್ಷ ಪರಮೇಶ್ವರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳಾ ಅಗ್ನೇಸ್ ಲೋಬೊ, ಪೋಷಕ ಸಮಿತಿಯ ಸದಸ್ಯರಾದ ಹನೀಪ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರು ಹಾಗೂ ಮಕ್ಕಳು ತಮ್ಮ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾ ಪರವಾಗಿ ಶಿಕ್ಷಕರು, ಶಾಲಾ ಪೋಷಕರ ಸಮಿತಿ, ಚಾಲಕರ, ಬಿಲ್ಲವ ವೇದಿಕೆ ಬಳ್ಳಮಂಜ ಮತ್ತು ಅಡುಗೆ ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿದ ವಿಠಲ್ ಬಿ ಮಾತನಾಡಿ ಶಾಲೆಯ ಅಭಿವೃದ್ಧಿಗೆ ನನ್ನೊಂದಿಗೆ ಸಹಕರಿಸಿದ ಪೋಷಕರಿಗೆ ಹಾಗೂ ಊರವರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಮಕ್ಕಳಿಗೆ ಬುದ್ಧಿ ಮಾತುಗಳನ್ನು ಹೇಳಿ ತಮ್ಮ ಮುಂದಿನ ವಿದ್ಯಾಭ್ಯಾಸವು ಈ ಶಾಲೆಯ ಹೆಸರು ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಶಿಕ್ಷಕ ರಮೇಶ್ ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕಿ ದಿವ್ಯ ಸ್ವಾಗತಿಸಿ, ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ನಿರೂಪಿಸಿದರು. ಶಿಕ್ಷಕಿ ಸುನಿತಾ. ಬಿ ಧನ್ಯವಾದವಿತ್ತರು. ಮಕ್ಕಳ ಪೋಷಕರು, ಊರವರು, ಶಿಕ್ಷಕರು ಉಪಸ್ಥಿತರಿದ್ದರು.

Related posts

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya
error: Content is protected !!