38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ಬಿಎಮ್ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಮೊಹಮ್ಮದ್ ಕೆಎಸ್ಆರ್ ಟಿಸಿ ಉಪಸ್ಥಿತರಿದ್ದರು. ಇಬ್ರಾಹಿಂ ಉಸ್ತಾದ್ ಅವರು ದುವಾ ಕಾರ್ಯಕ್ರಮ ನೆರವೇರಿಸಿ, ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ರವರು ವಾಚಿಸಿದರು. ಹಳೆ ಕಮಿಟಿಯನ್ನು ಬರ್ಕಾಸುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಪ್ರಧಾನ ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಸುಲೈಮಾನ್ ಎ.ಪಿ., ಇಲ್ಯಾಸ್ ನಾಡ್ಜೆ, ಕೋಶಾಧಿಕಾರಿಯಾಗಿ ರಹೀಮ್ ಪುನರಾಯ್ಕೆಗೊಂಡರು.

ಸದಸ್ಯರುಗಳಾಗಿ ಸಲಿಮ್, ರಹೀಮ್ ಯು.ಕೆ, ಅಝೀಜ್ ಯು.ಕೆ, ಅಬುಸಲಿ ಎನ್.ಆರ್., ರಹಿಮಾನ್, ಇಸುಬು ಹಲೇಜಿ ಮಯ್ಯದ್ದಿ , ಅಶ್ರಫ್ , ಅಶ್ರಫ್ ಮೋನು, ಸಂಸುಂದ್ದಿನ್ ನಾಡ್ಜೆ, ಹನೀಫ್ , ಮುಸ್ತಫಾ , ಹಸನ್ , ಆಸೀಫ್ , ಆನ್ಸರ್ ಯು ಪಿ. ಆಯ್ಕೆಗೊಂಡರು.


ನೂತನ ಮದರಸದ ಕೆಲಸ ಕಾರ್ಯಗಳು ಆದಷ್ಟು ಬೇಗ ಪೂರ್ತಿಗೊಳಿಸಲು ದಾನಿಗಳ ಸಹಕಾರ ಕೇಳುವುದೆಂದು ತೀರ್ಮಾನಿಸಿ ಆದಷ್ಟು ಬೇಗ ಮದರಸ ಪೂರ್ತಿ ಗೊಳಿಸುವ ಪ್ರಯತ್ನ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!