July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

ಉಜಿರೆ : ಭಾರತ ಚುನಾವಣಾ ಆಯೋಗ , ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.24 ರಂದು ಎಸ್.ಡಿ.ಎಂ (MSW) ಪಿಜಿ ಕಾಲೇಜಿನಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾ ಸಂಪನ್ಮೂಲ ವ್ಯಕ್ತಿ(DLMT) ಯೋಗೇಶ ಹೆಚ್.ಆರ್, ಯುವ ಮತದಾರರಿಗೆ ಪ್ರತೀ ಬಾರಿ ಚುನಾವಣೆಯಲ್ಲಿ ಮರೆಯದೇ ಮತದಾನ ಮಾಡಿ ಪ್ರಜಾಪ್ರಭುತ್ವದ ಯಜಮಾನರಾಗಿ ಎಂದು ಕರೆಕೊಟ್ಟರು. ಭವಿಷ್ಯದ ಮತದಾರರು ಹಾಗೂ ಯುವ ಮತದಾರರು VHA App ಡೌನ್ಲೋಡ್ ಮಾಡಿಕೊಂಡು ಅಥವಾ ceokarnataka.gov.in ವೆಬ್ಸೈಟ್ನಲ್ಲಿ ಲಾಗಿನ್ ಆಗಿ
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರಿರುವುದನ್ನು ಖಚಿತಪಡಿಸಿಕೊಂಡು ಯಾವುದೇ ಆಮಿಷಗಳಿಗೆ ಬಲಿಯಾಗದೆ ಈ ಬಾರಿಯ ಮತದಾನದಲ್ಲಿ ತಪ್ಪದೇ ಭಾಗವಹಿಸುವ ಮೂಲಕ ಚುನಾವಣಾ ಪರ್ವ ಭಾರತದ ಗರ್ವ ಎಂಬ ಘೋಷ ವಾಕ್ಯವನ್ನು ಸಾಬೀತು ಪಡಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಸಹಾಯಕ ನೋಡಲ್ ಅಧಿಕಾರಿ ತೇಜಾಕ್ಷಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಡಿ.ಎಮ್ ಕಾಲೇಜಿನ ಡೀನ್ ಆದ ಡಾ.ವಿಶ್ವನಾಥ್ , ಹೆಚ್.ಒಡಿ ಡಾ.ರವಿಶಂಕರ್, ಸ್ವೀಪ್ ಸಮಿತಿ ಸದಸ್ಯರಾದ ಡೊಂಬಯ್ಯ ಇಡ್ಕಿದು, ನೆಹರು ಕೇಂದ್ರ ಮಂಗಳೂರು ಇದರ ತಾ.ಸಂಯೋಜಕರಾದ , ಶಾಂತಪ್ಪ ಕರಪತ್ರ ಬಿಡುಗಡೆ ಮಾಡಿದರು. ತಾಲೂಕು ಸಂಪನ್ಮೂಲ ವ್ಯಕ್ತಿಗಳಾದ (TLMT) ಶುಭಾ ಕೆ, ಹಾಗೂ ದಿವ್ಯಾ ಕುಮಾರಿ ಯುವ ಮತದಾರರ ಅಭಿಪ್ರಾಯ ಆಲಿಸಿ, ತಪ್ಪದೇ ಮತದಾನದಲ್ಲಿ ಭಾಗವಹಿಸುವ ಜೊತೆಗೆ ಇತರರನ್ನು ಮತದಾನದಲ್ಲಿ ಭಾಗವಹಿಸುವಂತೆ ಮಾಡುವಲ್ಲಿ ರಾಯಭಾರಿಗಳಾಗಿ ಕೆಲಸ ಮಾಡುವಂತೆ ತಿಳಿಸಿದರು.

Related posts

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya
error: Content is protected !!