23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

ಉಜಿರೆ : ಭಾರತ ಚುನಾವಣಾ ಆಯೋಗ , ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.24 ರಂದು ಎಸ್.ಡಿ.ಎಂ (MSW) ಪಿಜಿ ಕಾಲೇಜಿನಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾ ಸಂಪನ್ಮೂಲ ವ್ಯಕ್ತಿ(DLMT) ಯೋಗೇಶ ಹೆಚ್.ಆರ್, ಯುವ ಮತದಾರರಿಗೆ ಪ್ರತೀ ಬಾರಿ ಚುನಾವಣೆಯಲ್ಲಿ ಮರೆಯದೇ ಮತದಾನ ಮಾಡಿ ಪ್ರಜಾಪ್ರಭುತ್ವದ ಯಜಮಾನರಾಗಿ ಎಂದು ಕರೆಕೊಟ್ಟರು. ಭವಿಷ್ಯದ ಮತದಾರರು ಹಾಗೂ ಯುವ ಮತದಾರರು VHA App ಡೌನ್ಲೋಡ್ ಮಾಡಿಕೊಂಡು ಅಥವಾ ceokarnataka.gov.in ವೆಬ್ಸೈಟ್ನಲ್ಲಿ ಲಾಗಿನ್ ಆಗಿ
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರಿರುವುದನ್ನು ಖಚಿತಪಡಿಸಿಕೊಂಡು ಯಾವುದೇ ಆಮಿಷಗಳಿಗೆ ಬಲಿಯಾಗದೆ ಈ ಬಾರಿಯ ಮತದಾನದಲ್ಲಿ ತಪ್ಪದೇ ಭಾಗವಹಿಸುವ ಮೂಲಕ ಚುನಾವಣಾ ಪರ್ವ ಭಾರತದ ಗರ್ವ ಎಂಬ ಘೋಷ ವಾಕ್ಯವನ್ನು ಸಾಬೀತು ಪಡಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಸಹಾಯಕ ನೋಡಲ್ ಅಧಿಕಾರಿ ತೇಜಾಕ್ಷಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಡಿ.ಎಮ್ ಕಾಲೇಜಿನ ಡೀನ್ ಆದ ಡಾ.ವಿಶ್ವನಾಥ್ , ಹೆಚ್.ಒಡಿ ಡಾ.ರವಿಶಂಕರ್, ಸ್ವೀಪ್ ಸಮಿತಿ ಸದಸ್ಯರಾದ ಡೊಂಬಯ್ಯ ಇಡ್ಕಿದು, ನೆಹರು ಕೇಂದ್ರ ಮಂಗಳೂರು ಇದರ ತಾ.ಸಂಯೋಜಕರಾದ , ಶಾಂತಪ್ಪ ಕರಪತ್ರ ಬಿಡುಗಡೆ ಮಾಡಿದರು. ತಾಲೂಕು ಸಂಪನ್ಮೂಲ ವ್ಯಕ್ತಿಗಳಾದ (TLMT) ಶುಭಾ ಕೆ, ಹಾಗೂ ದಿವ್ಯಾ ಕುಮಾರಿ ಯುವ ಮತದಾರರ ಅಭಿಪ್ರಾಯ ಆಲಿಸಿ, ತಪ್ಪದೇ ಮತದಾನದಲ್ಲಿ ಭಾಗವಹಿಸುವ ಜೊತೆಗೆ ಇತರರನ್ನು ಮತದಾನದಲ್ಲಿ ಭಾಗವಹಿಸುವಂತೆ ಮಾಡುವಲ್ಲಿ ರಾಯಭಾರಿಗಳಾಗಿ ಕೆಲಸ ಮಾಡುವಂತೆ ತಿಳಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya
error: Content is protected !!