ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

ವೇಣೂರು : ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿನ 2000- 2001 ನೇ ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ” ವೇಣೂರು ಬಾಹುಬಲಿ ಮಹಾಸ್ವಾಮಿಯ ಮಹಾಮಸ್ತಕಾಭಿಷೇಕದ ಸುಸಂದರ್ಭದಲ್ಲಿ ಫೆ.25 ರಂದು ವೇಣೂರು ಕಾಲೇಜಿನಲ್ಲಿ ಜರುಗಿತು.


24 ಜನ ಹಳೆ ವಿದ್ಯಾರ್ಥಿಗಳು ಬೇರೆ ಬೇರೆ ಊರಿನಲ್ಲಿ ನೆಲೆಸಿದ್ದರೂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿದರು. 23 ವರ್ಷಗಳ ನಂತರ ನಡೆದ ಅಪೂರ್ವ ಸಮಾಗಮದಲ್ಲಿ ಎಲ್ಲರೂ ಧನ್ಯತೆಯಿಂದ ಪರಸ್ಪರ ಮನತುಂಬಿ ಅದೇ ಹಿಂದಿನ ಭಾಂದವ್ಯದಿಂದ ಮಾತಾಡಿ ಉಭಯ ಕುಶಲೋಪಹಾರಿ ವಿಚಾರಿಸಿದರು. ತಾವು ವ್ಯಾಸಂಗ ಮಾಡಿದ ವಿದ್ಯಾ ದೇಗುಲವಾದ ವೇಣೂರು ಪದವಿ ಪೂರ್ವ ಕಾಲೇಜಿಗೆ ಕೊಡುಗೆಯನ್ನು ನೀಡುವ ಬಗ್ಗೆ ಸಮಾರಂಭದಲ್ಲಿ ಚರ್ಚಿಸಿ ನಿರ್ಣಯಿಸಲಾಯಿತು.


ಸಮಾರಂಭದಲ್ಲಿ ಭಾಗವಹಿಸಿದ ಎಲ್ಲಾ ಹಳೇ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ದೂರದ ಕಾಸರಗೋಡಿನ ಬದಿಯಡ್ಕ, ಕುಂಬ್ಳೆ, ಬೆಂಗಳೂರು, ಮಂಗಳೂರು, ಬಂಟ್ವಾಳ ಪುತ್ತೂರು ಕಾರ್ಕಳ ಮೂಡಬಿದ್ರಿ ಮುಂತಾದ ಕಡೆಗಳಿಂದ ಹಳೆ ವಿದ್ಯಾರ್ಥಿಗಳು ಆಗಮಿಸಿ ಶುಭ ಹಾರೈಸಿದರು.


ಸಮಾರಂಭ ನಡೆಸಲು ಅವಕಾಶ ಮಾಡಿಕೊಟ್ಟ ವೇಣೂರು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ, ಉಪನ್ಯಾಸಕ ವೃಂದದವರಿಗೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.
ಅತ್ಯಂತ ಸರಳ ಸಮಾರಂಭವನ್ನು ಹಳೆ ವಿದ್ಯಾರ್ಥಿಯಾಗಿರುವ ಶ್ರೀಮತಿ ಕುಶಲತಾ ಪ್ರಾರ್ಥಿಸಿ, ನವೀನ್ ಪೂಜಾರಿ ಪಚ್ಚೇರಿ ಸ್ವಾಗತಿಸಿದರು. ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವೀಣಾ ಎಸ್ ಹೆಗ್ಡೆ ಧನ್ಯವಾದ ಸಮರ್ಪಿಸಿದರು.

Related posts

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya
error: Content is protected !!