April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ಪ್ರಾರಂಭಗೊಂಡು ಮಾ. 2 ರವರೆಗೆ ನಡೆಯಲಿದೆ.

ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಸತೀಶ್ ಕುಮಾರ್ ಆರಿಗ ಚಾಲನೆ ನೀಡಿದರು. ನಂತರ ಶ್ರೀ ಅಯ್ಯಪ್ಪ ನಗರ ಗುರುವಾಯನಕೆರೆಯಿಂದ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನಾ ಮಂಗಳೋತ್ಸವದೊಂದಿಗೆ ಮೆರವಣಿಗೆ ಮೂಲಕ ಸಾಗಿ ಹಸಿರುವಾಣಿ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಅಧ್ಯಕ್ಷ ಸಂಪತ್ ಬಿ. ಸುವರ್ಣ, ಕಾರ್ಯಾಧ್ಯಕ್ಷ ವಿಶ್ವೇಶ್ ಕಿಣಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್ ಮಂದಾರಗಿರಿ, ಜೊತೆಕಾರ್ಯದರ್ಶಿ ರಾಮಚಂದ್ರ ಶೆಟ್ಟಿ, ಕೋಶಾಧಿಕಾರಿ ಶ್ರೀಧರ ಹೆಗ್ಡೆ, ಉಪಾಧ್ಯಕ್ಷರಾದ ಅಜಿತ್ ಮೋಹನ್, ವಸಂತ್ ಗೌಡ, ವೆಂಕಟರಮಣ ಅನಾರ್ಯ, ಗೌರವ ಸಲಹೆಗಾರರಾದ ರಾಜೇಶ್ ಶೆಟ್ಟಿ ನವಶಕ್ತಿ, ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರರು ಸುಕೇಶ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಅಜ್ರಿ, ಶಿವರಾಮ್ ಪ್ರಭು ಕಾವೇರಿ, ರಾಜುಶೆಟ್ಟಿ ಬೆಂಗತ್ಯಾರು, ದಿನಕರ ಆದೇಲು ಗುರುವಾಯನಕೆರೆ, ಬೆಳ್ತಂಗಡಿ ಗುರುದೇವ ಬ್ಯಾಂಕ್ ನ ಸಿಇಒ ಅಶ್ವಥ್ ಕುಮಾರ್, ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ದೆಗಳು: ಪರ್ವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ನಾಗರಿಕರಿಗೆ ದೈವಾರಾಧನೆ ವಿಚಾರದ ಕುರಿತು ಪ್ರಬಂಧ ರಚನೆ, ಭಾಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಂಧಿ ಸ್ಪರ್ಧೆ, ತೆಂಗಿನ ಗರಿ, ಸೋಗೆ ಗರಿ, ಬೈಹುಲ್ಲು, ಬಾಳೆ ದಿಮಡು, ಹಾಳೆಯ ಕಲಾಕೃತಿ ವಿವಿಧ ಸ್ಫರ್ಧೆಗಳು ನಡೆಯಿತು.

Related posts

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya
error: Content is protected !!