24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ಪ್ರಾರಂಭಗೊಂಡು ಮಾ. 2 ರವರೆಗೆ ನಡೆಯಲಿದೆ.

ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಸತೀಶ್ ಕುಮಾರ್ ಆರಿಗ ಚಾಲನೆ ನೀಡಿದರು. ನಂತರ ಶ್ರೀ ಅಯ್ಯಪ್ಪ ನಗರ ಗುರುವಾಯನಕೆರೆಯಿಂದ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನಾ ಮಂಗಳೋತ್ಸವದೊಂದಿಗೆ ಮೆರವಣಿಗೆ ಮೂಲಕ ಸಾಗಿ ಹಸಿರುವಾಣಿ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಅಧ್ಯಕ್ಷ ಸಂಪತ್ ಬಿ. ಸುವರ್ಣ, ಕಾರ್ಯಾಧ್ಯಕ್ಷ ವಿಶ್ವೇಶ್ ಕಿಣಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್ ಮಂದಾರಗಿರಿ, ಜೊತೆಕಾರ್ಯದರ್ಶಿ ರಾಮಚಂದ್ರ ಶೆಟ್ಟಿ, ಕೋಶಾಧಿಕಾರಿ ಶ್ರೀಧರ ಹೆಗ್ಡೆ, ಉಪಾಧ್ಯಕ್ಷರಾದ ಅಜಿತ್ ಮೋಹನ್, ವಸಂತ್ ಗೌಡ, ವೆಂಕಟರಮಣ ಅನಾರ್ಯ, ಗೌರವ ಸಲಹೆಗಾರರಾದ ರಾಜೇಶ್ ಶೆಟ್ಟಿ ನವಶಕ್ತಿ, ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರರು ಸುಕೇಶ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಅಜ್ರಿ, ಶಿವರಾಮ್ ಪ್ರಭು ಕಾವೇರಿ, ರಾಜುಶೆಟ್ಟಿ ಬೆಂಗತ್ಯಾರು, ದಿನಕರ ಆದೇಲು ಗುರುವಾಯನಕೆರೆ, ಬೆಳ್ತಂಗಡಿ ಗುರುದೇವ ಬ್ಯಾಂಕ್ ನ ಸಿಇಒ ಅಶ್ವಥ್ ಕುಮಾರ್, ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ದೆಗಳು: ಪರ್ವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ನಾಗರಿಕರಿಗೆ ದೈವಾರಾಧನೆ ವಿಚಾರದ ಕುರಿತು ಪ್ರಬಂಧ ರಚನೆ, ಭಾಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಂಧಿ ಸ್ಪರ್ಧೆ, ತೆಂಗಿನ ಗರಿ, ಸೋಗೆ ಗರಿ, ಬೈಹುಲ್ಲು, ಬಾಳೆ ದಿಮಡು, ಹಾಳೆಯ ಕಲಾಕೃತಿ ವಿವಿಧ ಸ್ಫರ್ಧೆಗಳು ನಡೆಯಿತು.

Related posts

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!