26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದ ಉದ್ಘಾಟನಾ ಸಮಾರಂಭ ಫೆ.27 ರಂದು ನಡೆಯಿತು.

ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷರಾದ ಡಾ.ಎಂ ಮೋಹನ್ ಆಳ್ವ ಸಮ್ಮೇಳನ ಉದ್ಘಾಟಿಸಿದರು.

ತುಳುನಾಡ ಪಾರಂಪರಿಕ ವಸ್ತು ಪ್ರದರ್ಶನ ಮಳಿಗೆಯ ಉದ್ಘಾಟನೆಯನ್ನು ಜನಪದ ವಿದ್ವಾಂಸರಾದ ಡಾ.ಗಣೇಶ್ ಅಮೀನ್ ಸಂಕಮಾರ್ ನೇರವೇರಿಸಿದರು.

ಹಾವೇರಿ ಜಾನಪದ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಕೆ ಚಿನ್ನಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್,ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ,ಗುರುವಾಯನಕೆರೆ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ,ಉದ್ಯಮಿ ರಮೇಶ್ ಭಂಡಾರಿ ಆದೇಲು,ಎಕ್ಸೆಲ್ ಕಾಲೇಜಿನ ಟ್ರಸ್ಟ್ ಸತೀಶ್ ಕುಮಾರ್ ಆರಿಗ,ಬೆಳ್ತಂಗಡಿ ವಿನಾಯಕ ರೈಸ್ ಮಿಲ್ ನ ಚಂದ್ರಕಾಂತ್ ಕಾಮತ್,ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ವಿಶ್ವೇಶ್ ಕಿಣಿ ಉಪಸ್ಥಿತರಿದ್ದರು.

ತುಳುನಾಡ ದೈವರಾಧಕರ ಮಹಾ ಸಮ್ಮೇಳನದ ಪ್ರಧಾನ‌ ಸಂಚಾಲಕ ಸಂಪತ್ ಬಿ ಸುವರ್ಣ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.

ಸಂಜೆ ಸುವರ್ಣ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಪ್ರಭು ಮತ್ತು ಬಳಗದವರಿಂದ ಭಕ್ತಗಾನ ವೈಭವವು ನಡೆಯಿತು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya
error: Content is protected !!