22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ಪ್ರಾರಂಭಗೊಂಡು ಮಾ. 2 ರವರೆಗೆ ನಡೆಯಲಿದೆ.

ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಸತೀಶ್ ಕುಮಾರ್ ಆರಿಗ ಚಾಲನೆ ನೀಡಿದರು. ನಂತರ ಶ್ರೀ ಅಯ್ಯಪ್ಪ ನಗರ ಗುರುವಾಯನಕೆರೆಯಿಂದ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನಾ ಮಂಗಳೋತ್ಸವದೊಂದಿಗೆ ಮೆರವಣಿಗೆ ಮೂಲಕ ಸಾಗಿ ಹಸಿರುವಾಣಿ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಅಧ್ಯಕ್ಷ ಸಂಪತ್ ಬಿ. ಸುವರ್ಣ, ಕಾರ್ಯಾಧ್ಯಕ್ಷ ವಿಶ್ವೇಶ್ ಕಿಣಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್ ಮಂದಾರಗಿರಿ, ಜೊತೆಕಾರ್ಯದರ್ಶಿ ರಾಮಚಂದ್ರ ಶೆಟ್ಟಿ, ಕೋಶಾಧಿಕಾರಿ ಶ್ರೀಧರ ಹೆಗ್ಡೆ, ಉಪಾಧ್ಯಕ್ಷರಾದ ಅಜಿತ್ ಮೋಹನ್, ವಸಂತ್ ಗೌಡ, ವೆಂಕಟರಮಣ ಅನಾರ್ಯ, ಗೌರವ ಸಲಹೆಗಾರರಾದ ರಾಜೇಶ್ ಶೆಟ್ಟಿ ನವಶಕ್ತಿ, ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರರು ಸುಕೇಶ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಅಜ್ರಿ, ಶಿವರಾಮ್ ಪ್ರಭು ಕಾವೇರಿ, ರಾಜುಶೆಟ್ಟಿ ಬೆಂಗತ್ಯಾರು, ದಿನಕರ ಆದೇಲು ಗುರುವಾಯನಕೆರೆ, ಬೆಳ್ತಂಗಡಿ ಗುರುದೇವ ಬ್ಯಾಂಕ್ ನ ಸಿಇಒ ಅಶ್ವಥ್ ಕುಮಾರ್, ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ದೆಗಳು: ಪರ್ವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ನಾಗರಿಕರಿಗೆ ದೈವಾರಾಧನೆ ವಿಚಾರದ ಕುರಿತು ಪ್ರಬಂಧ ರಚನೆ, ಭಾಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಂಧಿ ಸ್ಪರ್ಧೆ, ತೆಂಗಿನ ಗರಿ, ಸೋಗೆ ಗರಿ, ಬೈಹುಲ್ಲು, ಬಾಳೆ ದಿಮಡು, ಹಾಳೆಯ ಕಲಾಕೃತಿ ವಿವಿಧ ಸ್ಫರ್ಧೆಗಳು ನಡೆಯಿತು.

Related posts

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya
error: Content is protected !!