23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ಪ್ರಾರಂಭಗೊಂಡು ಮಾ. 2 ರವರೆಗೆ ನಡೆಯಲಿದೆ.

ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಸತೀಶ್ ಕುಮಾರ್ ಆರಿಗ ಚಾಲನೆ ನೀಡಿದರು. ನಂತರ ಶ್ರೀ ಅಯ್ಯಪ್ಪ ನಗರ ಗುರುವಾಯನಕೆರೆಯಿಂದ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನಾ ಮಂಗಳೋತ್ಸವದೊಂದಿಗೆ ಮೆರವಣಿಗೆ ಮೂಲಕ ಸಾಗಿ ಹಸಿರುವಾಣಿ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಅಧ್ಯಕ್ಷ ಸಂಪತ್ ಬಿ. ಸುವರ್ಣ, ಕಾರ್ಯಾಧ್ಯಕ್ಷ ವಿಶ್ವೇಶ್ ಕಿಣಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್ ಮಂದಾರಗಿರಿ, ಜೊತೆಕಾರ್ಯದರ್ಶಿ ರಾಮಚಂದ್ರ ಶೆಟ್ಟಿ, ಕೋಶಾಧಿಕಾರಿ ಶ್ರೀಧರ ಹೆಗ್ಡೆ, ಉಪಾಧ್ಯಕ್ಷರಾದ ಅಜಿತ್ ಮೋಹನ್, ವಸಂತ್ ಗೌಡ, ವೆಂಕಟರಮಣ ಅನಾರ್ಯ, ಗೌರವ ಸಲಹೆಗಾರರಾದ ರಾಜೇಶ್ ಶೆಟ್ಟಿ ನವಶಕ್ತಿ, ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರರು ಸುಕೇಶ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಅಜ್ರಿ, ಶಿವರಾಮ್ ಪ್ರಭು ಕಾವೇರಿ, ರಾಜುಶೆಟ್ಟಿ ಬೆಂಗತ್ಯಾರು, ದಿನಕರ ಆದೇಲು ಗುರುವಾಯನಕೆರೆ, ಬೆಳ್ತಂಗಡಿ ಗುರುದೇವ ಬ್ಯಾಂಕ್ ನ ಸಿಇಒ ಅಶ್ವಥ್ ಕುಮಾರ್, ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ದೆಗಳು: ಪರ್ವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ನಾಗರಿಕರಿಗೆ ದೈವಾರಾಧನೆ ವಿಚಾರದ ಕುರಿತು ಪ್ರಬಂಧ ರಚನೆ, ಭಾಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಂಧಿ ಸ್ಪರ್ಧೆ, ತೆಂಗಿನ ಗರಿ, ಸೋಗೆ ಗರಿ, ಬೈಹುಲ್ಲು, ಬಾಳೆ ದಿಮಡು, ಹಾಳೆಯ ಕಲಾಕೃತಿ ವಿವಿಧ ಸ್ಫರ್ಧೆಗಳು ನಡೆಯಿತು.

Related posts

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!