April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ ಕೂಡ ಅಳವಡಿಸಿಕೊಳ್ಳಿ, ಮಾದಕ ದ್ರವ್ಯಗಳಿಂದ ದೂರ ಇರಿ, ರುಡ್‌ಸೆಟ್ ಸಂಸ್ಥೆಯು ನಿಮಿಗೆ ವೃತ್ತಿ ಜೀವನದ ಜೊತೆಗೆ ಮೌಲ್ಯಾದಾರಿತ ಬದುಕನ್ನು ಕಲಿಸಿ ಕೊಟ್ಟಿದೆ, ಇದನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿ ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್‌ರವರು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕಿ ಶ್ರೀಮತಿ ಅನಸೂಯ ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 25 ಅಭ್ಯರ್ಥಿಗಳು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya
error: Content is protected !!