22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ ಕೂಡ ಅಳವಡಿಸಿಕೊಳ್ಳಿ, ಮಾದಕ ದ್ರವ್ಯಗಳಿಂದ ದೂರ ಇರಿ, ರುಡ್‌ಸೆಟ್ ಸಂಸ್ಥೆಯು ನಿಮಿಗೆ ವೃತ್ತಿ ಜೀವನದ ಜೊತೆಗೆ ಮೌಲ್ಯಾದಾರಿತ ಬದುಕನ್ನು ಕಲಿಸಿ ಕೊಟ್ಟಿದೆ, ಇದನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿ ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್‌ರವರು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕಿ ಶ್ರೀಮತಿ ಅನಸೂಯ ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 25 ಅಭ್ಯರ್ಥಿಗಳು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!