32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

ಬೆಳ್ತಂಗಡಿ: ಕೆ ಟಿ ಗಟ್ಟಿಯವರದು ಸ್ವಯಂ ಪ್ರತಿಭೆ. ಸ್ವ ಅಧ್ಯಯನ, ಜೀವನಾನುಭವ, ವೃತ್ತಿ ಅನುಭವದ ಹಿನ್ನೆಲೆಯ ಬರವಣಿಗೆಯಾಗಿದೆ. ಅವರ ವೈಚಾರಿಕ ನಿಲುವುಗಳ ಬರವಣಿಗೆಗಳು ನೇರ ನಿಷ್ಠರವಾಗಿದ್ದರೂ ಪ್ರಸ್ತುತ ಕಾಲಮಾನದ ಸಾಮಾಜಿಕ ರಾಜಕೀಯ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವಿಶ್ಲೇಷಣೆಯೂ ಮಾರ್ಗದರ್ಶಕವೂ ಆಗಿದೆ ಎಂದು ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾಬಲ ಗೌಡರವರು ಅಭಿಪ್ರಾಯ ಪಟ್ಟರು.

ಅವರು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ವಾಣಿ ಕಾಲೇಜಿನಲ್ಲಿ ನಡೆದ ಕೆ ಟಿ ಗಟ್ಟಿಯವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಮಾತನಾಡುತ್ತಿದ್ದರು.

ಎ. ಕೃಷ್ಣಪ್ಪ ಪೂಜಾರಿಯವರು ಮಾತನಾಡಿ, ಕೆ ಟಿ ಗಟ್ಟಿಯವರು ನಮ್ಮ ತಾಲೂಕಿನವರೆಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಅವರ ಸಾಹಿತ್ಯಿಕ ಸಾಧನೆ ಅತ್ಯಂತ ಮೌಲಿಕವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಬೆಳಾಲು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಮಕೃಷ್ಣ ಭಟ್ ರವರು ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿಯವರು ವಂದಿಸಿದರು, ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಗಳಾದ ಬೆಳ್ಳಿಯಪ್ಪರವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya
error: Content is protected !!