22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

ಬೆಳ್ತಂಗಡಿ: ಕೆ ಟಿ ಗಟ್ಟಿಯವರದು ಸ್ವಯಂ ಪ್ರತಿಭೆ. ಸ್ವ ಅಧ್ಯಯನ, ಜೀವನಾನುಭವ, ವೃತ್ತಿ ಅನುಭವದ ಹಿನ್ನೆಲೆಯ ಬರವಣಿಗೆಯಾಗಿದೆ. ಅವರ ವೈಚಾರಿಕ ನಿಲುವುಗಳ ಬರವಣಿಗೆಗಳು ನೇರ ನಿಷ್ಠರವಾಗಿದ್ದರೂ ಪ್ರಸ್ತುತ ಕಾಲಮಾನದ ಸಾಮಾಜಿಕ ರಾಜಕೀಯ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವಿಶ್ಲೇಷಣೆಯೂ ಮಾರ್ಗದರ್ಶಕವೂ ಆಗಿದೆ ಎಂದು ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾಬಲ ಗೌಡರವರು ಅಭಿಪ್ರಾಯ ಪಟ್ಟರು.

ಅವರು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ವಾಣಿ ಕಾಲೇಜಿನಲ್ಲಿ ನಡೆದ ಕೆ ಟಿ ಗಟ್ಟಿಯವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಮಾತನಾಡುತ್ತಿದ್ದರು.

ಎ. ಕೃಷ್ಣಪ್ಪ ಪೂಜಾರಿಯವರು ಮಾತನಾಡಿ, ಕೆ ಟಿ ಗಟ್ಟಿಯವರು ನಮ್ಮ ತಾಲೂಕಿನವರೆಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಅವರ ಸಾಹಿತ್ಯಿಕ ಸಾಧನೆ ಅತ್ಯಂತ ಮೌಲಿಕವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಬೆಳಾಲು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಮಕೃಷ್ಣ ಭಟ್ ರವರು ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿಯವರು ವಂದಿಸಿದರು, ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಗಳಾದ ಬೆಳ್ಳಿಯಪ್ಪರವರು ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya
error: Content is protected !!