23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

ಬೆಳ್ತಂಗಡಿ: ಕೆ ಟಿ ಗಟ್ಟಿಯವರದು ಸ್ವಯಂ ಪ್ರತಿಭೆ. ಸ್ವ ಅಧ್ಯಯನ, ಜೀವನಾನುಭವ, ವೃತ್ತಿ ಅನುಭವದ ಹಿನ್ನೆಲೆಯ ಬರವಣಿಗೆಯಾಗಿದೆ. ಅವರ ವೈಚಾರಿಕ ನಿಲುವುಗಳ ಬರವಣಿಗೆಗಳು ನೇರ ನಿಷ್ಠರವಾಗಿದ್ದರೂ ಪ್ರಸ್ತುತ ಕಾಲಮಾನದ ಸಾಮಾಜಿಕ ರಾಜಕೀಯ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವಿಶ್ಲೇಷಣೆಯೂ ಮಾರ್ಗದರ್ಶಕವೂ ಆಗಿದೆ ಎಂದು ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾಬಲ ಗೌಡರವರು ಅಭಿಪ್ರಾಯ ಪಟ್ಟರು.

ಅವರು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ವಾಣಿ ಕಾಲೇಜಿನಲ್ಲಿ ನಡೆದ ಕೆ ಟಿ ಗಟ್ಟಿಯವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಮಾತನಾಡುತ್ತಿದ್ದರು.

ಎ. ಕೃಷ್ಣಪ್ಪ ಪೂಜಾರಿಯವರು ಮಾತನಾಡಿ, ಕೆ ಟಿ ಗಟ್ಟಿಯವರು ನಮ್ಮ ತಾಲೂಕಿನವರೆಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಅವರ ಸಾಹಿತ್ಯಿಕ ಸಾಧನೆ ಅತ್ಯಂತ ಮೌಲಿಕವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಬೆಳಾಲು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಮಕೃಷ್ಣ ಭಟ್ ರವರು ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿಯವರು ವಂದಿಸಿದರು, ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಗಳಾದ ಬೆಳ್ಳಿಯಪ್ಪರವರು ಕಾರ್ಯಕ್ರಮ ನಿರೂಪಿಸಿದರು.

Related posts

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
error: Content is protected !!