25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಮಡಂತ್ಯಾರು ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ಡಾ. ಪ್ರಕಾಶ್ ಎಸ್ ಸರಕಾರದ ವತಿಯಿಂದ ನೇಮಕಗೊಂಡಿರುತ್ತಾರೆ.

ಶ್ರೀ ಕ್ಷೇತ್ರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಮೋಕ್ತೆಸರರಾದ ಎಮ್.ವಿಠಲ್ ಶೆಟ್ಟಿ ಇವರು ಅಧಿಕಾರವನ್ನು ಹಸ್ತಾಂತರಿಸಿದರು.

ಶ್ರೀ ಕ್ಷೇತ್ರದಲ್ಲಿ ಹಿಂದಿನ ಅವಧಿಯಲ್ಲಿ ನಡೆದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹಾಗೂ ಕ್ಷೇತ್ರದ ನಡಾವಳಿಗಳ ಬಗ್ಗೆ ಪ್ರಧಾನ ಅರ್ಚಕರಾದ ಪೇಜಾವರ ಟಿ. ವಿ.ಶ್ರೀಧರ ರಾವ್ ತಿಳಿಸಿದರು.

ಅಧಿಕಾರ ಸ್ವೀಕರಿಸಿದ ಡಾ. ಪ್ರಕಾಶ್ ಎಸ್ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.

ಸಭೆಯಲ್ಲಿ ಸಹ ಮೋಕ್ತೆಸರರಾದ ರತ್ನಾಕರ ಶೆಟ್ಟಿ ಮೂಡಯೂರು, ಶ್ರೀಮತಿ ವೇದಾವತಿ ಆಚಾರ್ಯ, ಪುಷ್ಪರಾಜ ಗೌಡ ಜೀರ್ಣೋದ್ಧಾರ ಕಮಿಟಿಯ ಅಧ್ಯಕ್ಷರಾದ ಕಾಂತಪ್ಪ ಗೌಡ, ಪಂಚಾಯಿತಿಯ ಸದಸ್ಯರಾದ ಕಿಶೋರ್ ಶೆಟ್ಟಿ, ಹರೀಶ್ ಶೆಟ್ಟಿ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!