23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya
error: Content is protected !!