July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya
error: Content is protected !!