23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!