ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!