ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ಹಂತದ ವಿಶೇಷ ಗ್ರಾಮ ಸಭೆಯು ಪ್ರಗತಿಪರ ಕೃಷಿಕರಾದ ಅಲೆಕ್ಸ್ ವೇಗಸ್ ರವರ ಅಧ್ಯಕ್ಷತೆಯಲ್ಲಿ ಫೆ.27ರಂದು ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಸಂತೋಷ , ಚಂದ್ರಶೇಖರ್, ಸುಮಲತಾ, ಹರಿಣಾಕ್ಷಿ, ದೀಪಿಕಾ, ಜಯಲಕ್ಷ್ಮೀ, ಶಶಿಕಲಾ ರವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಹಿಂದಿನ ಸಭೆಯ ಅನುಪಾಲನಾ ವರದಿ ಓದಿದರು. ತಾಲೂಕು ಮಟ್ಟದ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಾಮಾಜಿಕ ಪರಿಶೋಧನಾ ತಂಡದ ಸಂಪನ್ಮೂಲ ವ್ಯಕ್ತಿಗಳು ನರೇಗಾ ಹಾಗೂ 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ವರದಿಯನ್ನು ಸಭೆಗೆ ತಿಳಿಸಿದರು. ಪಂಚಾಯತ್ ಸಿಬ್ಬಂಧಿ ವರ್ಗ ಸಹಕರಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿ ಕುಮಾರಿ ಪ್ರಮೀಳಾ ವಂದಿಸಿದರು.

Leave a Comment

error: Content is protected !!