27.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ಹಂತದ ವಿಶೇಷ ಗ್ರಾಮ ಸಭೆಯು ಪ್ರಗತಿಪರ ಕೃಷಿಕರಾದ ಅಲೆಕ್ಸ್ ವೇಗಸ್ ರವರ ಅಧ್ಯಕ್ಷತೆಯಲ್ಲಿ ಫೆ.27ರಂದು ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಸಂತೋಷ , ಚಂದ್ರಶೇಖರ್, ಸುಮಲತಾ, ಹರಿಣಾಕ್ಷಿ, ದೀಪಿಕಾ, ಜಯಲಕ್ಷ್ಮೀ, ಶಶಿಕಲಾ ರವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಹಿಂದಿನ ಸಭೆಯ ಅನುಪಾಲನಾ ವರದಿ ಓದಿದರು. ತಾಲೂಕು ಮಟ್ಟದ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಾಮಾಜಿಕ ಪರಿಶೋಧನಾ ತಂಡದ ಸಂಪನ್ಮೂಲ ವ್ಯಕ್ತಿಗಳು ನರೇಗಾ ಹಾಗೂ 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ವರದಿಯನ್ನು ಸಭೆಗೆ ತಿಳಿಸಿದರು. ಪಂಚಾಯತ್ ಸಿಬ್ಬಂಧಿ ವರ್ಗ ಸಹಕರಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿ ಕುಮಾರಿ ಪ್ರಮೀಳಾ ವಂದಿಸಿದರು.

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya
error: Content is protected !!