July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ಹಂತದ ವಿಶೇಷ ಗ್ರಾಮ ಸಭೆಯು ಪ್ರಗತಿಪರ ಕೃಷಿಕರಾದ ಅಲೆಕ್ಸ್ ವೇಗಸ್ ರವರ ಅಧ್ಯಕ್ಷತೆಯಲ್ಲಿ ಫೆ.27ರಂದು ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಸಂತೋಷ , ಚಂದ್ರಶೇಖರ್, ಸುಮಲತಾ, ಹರಿಣಾಕ್ಷಿ, ದೀಪಿಕಾ, ಜಯಲಕ್ಷ್ಮೀ, ಶಶಿಕಲಾ ರವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಹಿಂದಿನ ಸಭೆಯ ಅನುಪಾಲನಾ ವರದಿ ಓದಿದರು. ತಾಲೂಕು ಮಟ್ಟದ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಾಮಾಜಿಕ ಪರಿಶೋಧನಾ ತಂಡದ ಸಂಪನ್ಮೂಲ ವ್ಯಕ್ತಿಗಳು ನರೇಗಾ ಹಾಗೂ 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ವರದಿಯನ್ನು ಸಭೆಗೆ ತಿಳಿಸಿದರು. ಪಂಚಾಯತ್ ಸಿಬ್ಬಂಧಿ ವರ್ಗ ಸಹಕರಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿ ಕುಮಾರಿ ಪ್ರಮೀಳಾ ವಂದಿಸಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!