23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

ಬೆಳ್ತಂಗಡಿ: ಪುಣೆಯಲ್ಲಿ ಸ್ವ ಉದ್ಯೋಗ ನಡೆಸುತ್ತಿರುವ ಗುರಿಪಳ್ಳ ಸರಕಾರಿ ಶಾಲಾ ಪದವಿ ಪೂರ್ವ ವಿದ್ಯಾರ್ಥಿ ಸುಬ್ರಹ್ಮಣ್ಯ ಭಟ್ ಅವರು ಪೋಷಕರ ಸಭೆಯ ಸಂದರ್ಭ ಅಪೂರ್ವ ಕೊಡುಗೆ ಸಮರ್ಪಿಸುವ ಮೂಲಕ ತನ್ನ ಶಾಲೆಯ ಮೇಲಿನ ಅಭಿಮಾನವನ್ನು ಎತ್ತಿಹಿಡಿದರು.


ದಾನಿಗಳಾದ ಅವರು ಶಾಲೆಯ “ನಲಿಕಲಿ” ವಿಭಾಗದ ಮಕ್ಕಳಿಗೆ 5 ರೌಂಡ್ ಟೇಬಲ್‌ಗಳು, 35 ಕುರ್ಚಿಗಳು, 5 ರೇಕ್ ಗಳು, ಒಂದು ಕಪಾಟು, ಮರದಿಂದ ನಿರ್ಮಿಸಿದ 4 ಟೇಬಲ್ ಮತ್ತು 4 ಕುರ್ಚಿಗಳು, ಒಂದು ಫ್ಯಾನ್ ಕೊಡುಗೆಯಾಗಿ ಸಮಾರಂಭದಲ್ಲಿ ಅರ್ಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಸವಿತಾ ಅವರು ಮಾತನಾಡಿ, ಬದುಕು ಕಟ್ಟೋಣ ಬನ್ನಿ‌ ತಂಡದ ಮೋಹನ್ ಕುಮಾರ್ ಮತ್ತು ಗ್ರಾ.ಪಂ ಅಧ್ಯಕ್ಷೆ ಉಷಾ ಅರವಿಂದ ಅವರು ಈ‌ ಹಿಂದೆ ಶಾಲೆಗೆ ಬಾಗಿಲೊಂದನ್ನು ಹಾಗೂ ಶೌಚಾಲಯದ ಬಾಗಿಲುಗಳನ್ನು ಹೊಸದಾಗಿ ಕೊಡುಗೆ ನೀಡಿದ್ದನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳದ ಕೃಷಿಕರಾದ ರಮಾನಂದ ಶರ್ಮ, ಉಜಿರೆ ಗ್ರಾ.ಪಂ ಸದಸ್ಯ ಸಚಿನ್, ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞ ಪಟವರ್ಧನ್, ಬೆಂಗಳೂರು ಇಂಡಿಯನ್ ಬ್ಯಾಂಕ್ ನ‌ ನಿವೃತ್ತ ವಿಶೇಷ ಅಧಿಕಾರಿ ಸಾವಿತ್ರಿ, ಬ್ಯಾಂಕ್ ಆಫ್ ಬರೋಡ ಬೆಂಗಳೂರು ಇದರ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಕಿರಣ್ ಮರಾಠೆ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ, ಸ್ಟೇಟ್ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕಿ ಶಾರದಾ ಆಠವಳೆ, ಬೆಳ್ತಂಗಡಿಯ ಕೃಷಿಕ ಯೋಗೀಶ್ ಭಟ್, ಲಲಿತಾ ಸುಬ್ರಹ್ಮಣ್ಯ ಭಟ್ ಪುಣೆ ಹಾಗೂ ಭಾರತಿ ಪುಸ್ತಕ ಭಂಡಾರದ ರೇಖಾ ಹಾಗೂ ಕುಟುಂಬಸ್ಥರು ಹಾಜರಿದ್ದರು.

ಮುಖ್ಯ ಶಿಕ್ಷಕಿ ಮಂಜುಳಾ ಜೆ.ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ‌ ಗೌರವ ಶಿಕ್ಷಕಿ ಅಂಜಲಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಅನಿತಾ ವಂದಿಸಿದರು.

Related posts

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya
error: Content is protected !!