22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

ಬೆಳ್ತಂಗಡಿ: ಪುಣೆಯಲ್ಲಿ ಸ್ವ ಉದ್ಯೋಗ ನಡೆಸುತ್ತಿರುವ ಗುರಿಪಳ್ಳ ಸರಕಾರಿ ಶಾಲಾ ಪದವಿ ಪೂರ್ವ ವಿದ್ಯಾರ್ಥಿ ಸುಬ್ರಹ್ಮಣ್ಯ ಭಟ್ ಅವರು ಪೋಷಕರ ಸಭೆಯ ಸಂದರ್ಭ ಅಪೂರ್ವ ಕೊಡುಗೆ ಸಮರ್ಪಿಸುವ ಮೂಲಕ ತನ್ನ ಶಾಲೆಯ ಮೇಲಿನ ಅಭಿಮಾನವನ್ನು ಎತ್ತಿಹಿಡಿದರು.


ದಾನಿಗಳಾದ ಅವರು ಶಾಲೆಯ “ನಲಿಕಲಿ” ವಿಭಾಗದ ಮಕ್ಕಳಿಗೆ 5 ರೌಂಡ್ ಟೇಬಲ್‌ಗಳು, 35 ಕುರ್ಚಿಗಳು, 5 ರೇಕ್ ಗಳು, ಒಂದು ಕಪಾಟು, ಮರದಿಂದ ನಿರ್ಮಿಸಿದ 4 ಟೇಬಲ್ ಮತ್ತು 4 ಕುರ್ಚಿಗಳು, ಒಂದು ಫ್ಯಾನ್ ಕೊಡುಗೆಯಾಗಿ ಸಮಾರಂಭದಲ್ಲಿ ಅರ್ಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಸವಿತಾ ಅವರು ಮಾತನಾಡಿ, ಬದುಕು ಕಟ್ಟೋಣ ಬನ್ನಿ‌ ತಂಡದ ಮೋಹನ್ ಕುಮಾರ್ ಮತ್ತು ಗ್ರಾ.ಪಂ ಅಧ್ಯಕ್ಷೆ ಉಷಾ ಅರವಿಂದ ಅವರು ಈ‌ ಹಿಂದೆ ಶಾಲೆಗೆ ಬಾಗಿಲೊಂದನ್ನು ಹಾಗೂ ಶೌಚಾಲಯದ ಬಾಗಿಲುಗಳನ್ನು ಹೊಸದಾಗಿ ಕೊಡುಗೆ ನೀಡಿದ್ದನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳದ ಕೃಷಿಕರಾದ ರಮಾನಂದ ಶರ್ಮ, ಉಜಿರೆ ಗ್ರಾ.ಪಂ ಸದಸ್ಯ ಸಚಿನ್, ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞ ಪಟವರ್ಧನ್, ಬೆಂಗಳೂರು ಇಂಡಿಯನ್ ಬ್ಯಾಂಕ್ ನ‌ ನಿವೃತ್ತ ವಿಶೇಷ ಅಧಿಕಾರಿ ಸಾವಿತ್ರಿ, ಬ್ಯಾಂಕ್ ಆಫ್ ಬರೋಡ ಬೆಂಗಳೂರು ಇದರ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಕಿರಣ್ ಮರಾಠೆ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ, ಸ್ಟೇಟ್ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕಿ ಶಾರದಾ ಆಠವಳೆ, ಬೆಳ್ತಂಗಡಿಯ ಕೃಷಿಕ ಯೋಗೀಶ್ ಭಟ್, ಲಲಿತಾ ಸುಬ್ರಹ್ಮಣ್ಯ ಭಟ್ ಪುಣೆ ಹಾಗೂ ಭಾರತಿ ಪುಸ್ತಕ ಭಂಡಾರದ ರೇಖಾ ಹಾಗೂ ಕುಟುಂಬಸ್ಥರು ಹಾಜರಿದ್ದರು.

ಮುಖ್ಯ ಶಿಕ್ಷಕಿ ಮಂಜುಳಾ ಜೆ.ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ‌ ಗೌರವ ಶಿಕ್ಷಕಿ ಅಂಜಲಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಅನಿತಾ ವಂದಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya
error: Content is protected !!