23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಮಡಂತ್ಯಾರು ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ಡಾ. ಪ್ರಕಾಶ್ ಎಸ್ ಸರಕಾರದ ವತಿಯಿಂದ ನೇಮಕಗೊಂಡಿರುತ್ತಾರೆ.

ಶ್ರೀ ಕ್ಷೇತ್ರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಮೋಕ್ತೆಸರರಾದ ಎಮ್.ವಿಠಲ್ ಶೆಟ್ಟಿ ಇವರು ಅಧಿಕಾರವನ್ನು ಹಸ್ತಾಂತರಿಸಿದರು.

ಶ್ರೀ ಕ್ಷೇತ್ರದಲ್ಲಿ ಹಿಂದಿನ ಅವಧಿಯಲ್ಲಿ ನಡೆದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹಾಗೂ ಕ್ಷೇತ್ರದ ನಡಾವಳಿಗಳ ಬಗ್ಗೆ ಪ್ರಧಾನ ಅರ್ಚಕರಾದ ಪೇಜಾವರ ಟಿ. ವಿ.ಶ್ರೀಧರ ರಾವ್ ತಿಳಿಸಿದರು.

ಅಧಿಕಾರ ಸ್ವೀಕರಿಸಿದ ಡಾ. ಪ್ರಕಾಶ್ ಎಸ್ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.

ಸಭೆಯಲ್ಲಿ ಸಹ ಮೋಕ್ತೆಸರರಾದ ರತ್ನಾಕರ ಶೆಟ್ಟಿ ಮೂಡಯೂರು, ಶ್ರೀಮತಿ ವೇದಾವತಿ ಆಚಾರ್ಯ, ಪುಷ್ಪರಾಜ ಗೌಡ ಜೀರ್ಣೋದ್ಧಾರ ಕಮಿಟಿಯ ಅಧ್ಯಕ್ಷರಾದ ಕಾಂತಪ್ಪ ಗೌಡ, ಪಂಚಾಯಿತಿಯ ಸದಸ್ಯರಾದ ಕಿಶೋರ್ ಶೆಟ್ಟಿ, ಹರೀಶ್ ಶೆಟ್ಟಿ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya
error: Content is protected !!