September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಮಡಂತ್ಯಾರು ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ಡಾ. ಪ್ರಕಾಶ್ ಎಸ್ ಸರಕಾರದ ವತಿಯಿಂದ ನೇಮಕಗೊಂಡಿರುತ್ತಾರೆ.

ಶ್ರೀ ಕ್ಷೇತ್ರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಮೋಕ್ತೆಸರರಾದ ಎಮ್.ವಿಠಲ್ ಶೆಟ್ಟಿ ಇವರು ಅಧಿಕಾರವನ್ನು ಹಸ್ತಾಂತರಿಸಿದರು.

ಶ್ರೀ ಕ್ಷೇತ್ರದಲ್ಲಿ ಹಿಂದಿನ ಅವಧಿಯಲ್ಲಿ ನಡೆದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹಾಗೂ ಕ್ಷೇತ್ರದ ನಡಾವಳಿಗಳ ಬಗ್ಗೆ ಪ್ರಧಾನ ಅರ್ಚಕರಾದ ಪೇಜಾವರ ಟಿ. ವಿ.ಶ್ರೀಧರ ರಾವ್ ತಿಳಿಸಿದರು.

ಅಧಿಕಾರ ಸ್ವೀಕರಿಸಿದ ಡಾ. ಪ್ರಕಾಶ್ ಎಸ್ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.

ಸಭೆಯಲ್ಲಿ ಸಹ ಮೋಕ್ತೆಸರರಾದ ರತ್ನಾಕರ ಶೆಟ್ಟಿ ಮೂಡಯೂರು, ಶ್ರೀಮತಿ ವೇದಾವತಿ ಆಚಾರ್ಯ, ಪುಷ್ಪರಾಜ ಗೌಡ ಜೀರ್ಣೋದ್ಧಾರ ಕಮಿಟಿಯ ಅಧ್ಯಕ್ಷರಾದ ಕಾಂತಪ್ಪ ಗೌಡ, ಪಂಚಾಯಿತಿಯ ಸದಸ್ಯರಾದ ಕಿಶೋರ್ ಶೆಟ್ಟಿ, ಹರೀಶ್ ಶೆಟ್ಟಿ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya
error: Content is protected !!