April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!