30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!