September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!