22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya
error: Content is protected !!