23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya
error: Content is protected !!