25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ಹಂತದ ವಿಶೇಷ ಗ್ರಾಮ ಸಭೆಯು ಪ್ರಗತಿಪರ ಕೃಷಿಕರಾದ ಅಲೆಕ್ಸ್ ವೇಗಸ್ ರವರ ಅಧ್ಯಕ್ಷತೆಯಲ್ಲಿ ಫೆ.27ರಂದು ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಸಂತೋಷ , ಚಂದ್ರಶೇಖರ್, ಸುಮಲತಾ, ಹರಿಣಾಕ್ಷಿ, ದೀಪಿಕಾ, ಜಯಲಕ್ಷ್ಮೀ, ಶಶಿಕಲಾ ರವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಹಿಂದಿನ ಸಭೆಯ ಅನುಪಾಲನಾ ವರದಿ ಓದಿದರು. ತಾಲೂಕು ಮಟ್ಟದ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಾಮಾಜಿಕ ಪರಿಶೋಧನಾ ತಂಡದ ಸಂಪನ್ಮೂಲ ವ್ಯಕ್ತಿಗಳು ನರೇಗಾ ಹಾಗೂ 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ವರದಿಯನ್ನು ಸಭೆಗೆ ತಿಳಿಸಿದರು. ಪಂಚಾಯತ್ ಸಿಬ್ಬಂಧಿ ವರ್ಗ ಸಹಕರಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿ ಕುಮಾರಿ ಪ್ರಮೀಳಾ ವಂದಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya
error: Content is protected !!