23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ಹಂತದ ವಿಶೇಷ ಗ್ರಾಮ ಸಭೆಯು ಪ್ರಗತಿಪರ ಕೃಷಿಕರಾದ ಅಲೆಕ್ಸ್ ವೇಗಸ್ ರವರ ಅಧ್ಯಕ್ಷತೆಯಲ್ಲಿ ಫೆ.27ರಂದು ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಸಂತೋಷ , ಚಂದ್ರಶೇಖರ್, ಸುಮಲತಾ, ಹರಿಣಾಕ್ಷಿ, ದೀಪಿಕಾ, ಜಯಲಕ್ಷ್ಮೀ, ಶಶಿಕಲಾ ರವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಹಿಂದಿನ ಸಭೆಯ ಅನುಪಾಲನಾ ವರದಿ ಓದಿದರು. ತಾಲೂಕು ಮಟ್ಟದ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಾಮಾಜಿಕ ಪರಿಶೋಧನಾ ತಂಡದ ಸಂಪನ್ಮೂಲ ವ್ಯಕ್ತಿಗಳು ನರೇಗಾ ಹಾಗೂ 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ವರದಿಯನ್ನು ಸಭೆಗೆ ತಿಳಿಸಿದರು. ಪಂಚಾಯತ್ ಸಿಬ್ಬಂಧಿ ವರ್ಗ ಸಹಕರಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿ ಕುಮಾರಿ ಪ್ರಮೀಳಾ ವಂದಿಸಿದರು.

Related posts

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!