July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ಹಂತದ ವಿಶೇಷ ಗ್ರಾಮ ಸಭೆಯು ಪ್ರಗತಿಪರ ಕೃಷಿಕರಾದ ಅಲೆಕ್ಸ್ ವೇಗಸ್ ರವರ ಅಧ್ಯಕ್ಷತೆಯಲ್ಲಿ ಫೆ.27ರಂದು ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಸಂತೋಷ , ಚಂದ್ರಶೇಖರ್, ಸುಮಲತಾ, ಹರಿಣಾಕ್ಷಿ, ದೀಪಿಕಾ, ಜಯಲಕ್ಷ್ಮೀ, ಶಶಿಕಲಾ ರವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ಹಿಂದಿನ ಸಭೆಯ ಅನುಪಾಲನಾ ವರದಿ ಓದಿದರು. ತಾಲೂಕು ಮಟ್ಟದ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸಾಮಾಜಿಕ ಪರಿಶೋಧನಾ ತಂಡದ ಸಂಪನ್ಮೂಲ ವ್ಯಕ್ತಿಗಳು ನರೇಗಾ ಹಾಗೂ 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ವರದಿಯನ್ನು ಸಭೆಗೆ ತಿಳಿಸಿದರು. ಪಂಚಾಯತ್ ಸಿಬ್ಬಂಧಿ ವರ್ಗ ಸಹಕರಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿ ಕುಮಾರಿ ಪ್ರಮೀಳಾ ವಂದಿಸಿದರು.

Related posts

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya
error: Content is protected !!