25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

ಬೆಳ್ತಂಗಡಿ: ಪುಣೆಯಲ್ಲಿ ಸ್ವ ಉದ್ಯೋಗ ನಡೆಸುತ್ತಿರುವ ಗುರಿಪಳ್ಳ ಸರಕಾರಿ ಶಾಲಾ ಪದವಿ ಪೂರ್ವ ವಿದ್ಯಾರ್ಥಿ ಸುಬ್ರಹ್ಮಣ್ಯ ಭಟ್ ಅವರು ಪೋಷಕರ ಸಭೆಯ ಸಂದರ್ಭ ಅಪೂರ್ವ ಕೊಡುಗೆ ಸಮರ್ಪಿಸುವ ಮೂಲಕ ತನ್ನ ಶಾಲೆಯ ಮೇಲಿನ ಅಭಿಮಾನವನ್ನು ಎತ್ತಿಹಿಡಿದರು.


ದಾನಿಗಳಾದ ಅವರು ಶಾಲೆಯ “ನಲಿಕಲಿ” ವಿಭಾಗದ ಮಕ್ಕಳಿಗೆ 5 ರೌಂಡ್ ಟೇಬಲ್‌ಗಳು, 35 ಕುರ್ಚಿಗಳು, 5 ರೇಕ್ ಗಳು, ಒಂದು ಕಪಾಟು, ಮರದಿಂದ ನಿರ್ಮಿಸಿದ 4 ಟೇಬಲ್ ಮತ್ತು 4 ಕುರ್ಚಿಗಳು, ಒಂದು ಫ್ಯಾನ್ ಕೊಡುಗೆಯಾಗಿ ಸಮಾರಂಭದಲ್ಲಿ ಅರ್ಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಸವಿತಾ ಅವರು ಮಾತನಾಡಿ, ಬದುಕು ಕಟ್ಟೋಣ ಬನ್ನಿ‌ ತಂಡದ ಮೋಹನ್ ಕುಮಾರ್ ಮತ್ತು ಗ್ರಾ.ಪಂ ಅಧ್ಯಕ್ಷೆ ಉಷಾ ಅರವಿಂದ ಅವರು ಈ‌ ಹಿಂದೆ ಶಾಲೆಗೆ ಬಾಗಿಲೊಂದನ್ನು ಹಾಗೂ ಶೌಚಾಲಯದ ಬಾಗಿಲುಗಳನ್ನು ಹೊಸದಾಗಿ ಕೊಡುಗೆ ನೀಡಿದ್ದನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳದ ಕೃಷಿಕರಾದ ರಮಾನಂದ ಶರ್ಮ, ಉಜಿರೆ ಗ್ರಾ.ಪಂ ಸದಸ್ಯ ಸಚಿನ್, ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞ ಪಟವರ್ಧನ್, ಬೆಂಗಳೂರು ಇಂಡಿಯನ್ ಬ್ಯಾಂಕ್ ನ‌ ನಿವೃತ್ತ ವಿಶೇಷ ಅಧಿಕಾರಿ ಸಾವಿತ್ರಿ, ಬ್ಯಾಂಕ್ ಆಫ್ ಬರೋಡ ಬೆಂಗಳೂರು ಇದರ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಕಿರಣ್ ಮರಾಠೆ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ, ಸ್ಟೇಟ್ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕಿ ಶಾರದಾ ಆಠವಳೆ, ಬೆಳ್ತಂಗಡಿಯ ಕೃಷಿಕ ಯೋಗೀಶ್ ಭಟ್, ಲಲಿತಾ ಸುಬ್ರಹ್ಮಣ್ಯ ಭಟ್ ಪುಣೆ ಹಾಗೂ ಭಾರತಿ ಪುಸ್ತಕ ಭಂಡಾರದ ರೇಖಾ ಹಾಗೂ ಕುಟುಂಬಸ್ಥರು ಹಾಜರಿದ್ದರು.

ಮುಖ್ಯ ಶಿಕ್ಷಕಿ ಮಂಜುಳಾ ಜೆ.ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ‌ ಗೌರವ ಶಿಕ್ಷಕಿ ಅಂಜಲಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಅನಿತಾ ವಂದಿಸಿದರು.

Related posts

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
error: Content is protected !!