25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಮಡಂತ್ಯಾರು ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ಡಾ. ಪ್ರಕಾಶ್ ಎಸ್ ಸರಕಾರದ ವತಿಯಿಂದ ನೇಮಕಗೊಂಡಿರುತ್ತಾರೆ.

ಶ್ರೀ ಕ್ಷೇತ್ರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಮೋಕ್ತೆಸರರಾದ ಎಮ್.ವಿಠಲ್ ಶೆಟ್ಟಿ ಇವರು ಅಧಿಕಾರವನ್ನು ಹಸ್ತಾಂತರಿಸಿದರು.

ಶ್ರೀ ಕ್ಷೇತ್ರದಲ್ಲಿ ಹಿಂದಿನ ಅವಧಿಯಲ್ಲಿ ನಡೆದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹಾಗೂ ಕ್ಷೇತ್ರದ ನಡಾವಳಿಗಳ ಬಗ್ಗೆ ಪ್ರಧಾನ ಅರ್ಚಕರಾದ ಪೇಜಾವರ ಟಿ. ವಿ.ಶ್ರೀಧರ ರಾವ್ ತಿಳಿಸಿದರು.

ಅಧಿಕಾರ ಸ್ವೀಕರಿಸಿದ ಡಾ. ಪ್ರಕಾಶ್ ಎಸ್ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.

ಸಭೆಯಲ್ಲಿ ಸಹ ಮೋಕ್ತೆಸರರಾದ ರತ್ನಾಕರ ಶೆಟ್ಟಿ ಮೂಡಯೂರು, ಶ್ರೀಮತಿ ವೇದಾವತಿ ಆಚಾರ್ಯ, ಪುಷ್ಪರಾಜ ಗೌಡ ಜೀರ್ಣೋದ್ಧಾರ ಕಮಿಟಿಯ ಅಧ್ಯಕ್ಷರಾದ ಕಾಂತಪ್ಪ ಗೌಡ, ಪಂಚಾಯಿತಿಯ ಸದಸ್ಯರಾದ ಕಿಶೋರ್ ಶೆಟ್ಟಿ, ಹರೀಶ್ ಶೆಟ್ಟಿ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!