25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!