25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya
error: Content is protected !!